ಜಿಲ್ಲಾಧಿಕಾರಿಯಿಂದ ಮಹತ್ವದ ಆದೇಶ: ಫೈನಾನ್ಸ್, ಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ

ಜಿಲ್ಲಾಧಿಕಾರಿಯಿಂದ ಮಹತ್ವದ ಆದೇಶ: ಫೈನಾನ್ಸ್, ಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ

Kadaba Times News
0

ಕಡಬ ಟೈಮ್ಸ್, ಮಂಗಳೂರು: ಫೈನಾನ್ಸ್, ಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಆದೇಶ ನೀಡಿದ್ದಾರೆ.

ಲಾಕ್ ಡೌನ್ ಕಾರಣದಿಂದಾಗಿ ಜನಸಾಮಾನ್ಯರು ಕೆಲಸ ಇಲ್ಲದೆ ಮನೆಯಲ್ಲೇ ಉಳಿಯುವಂತಾಗಿದೆ. ಇಂತಹ ಸಂದರ್ಭದಲ್ಲಿ ಪಡೆದಿರುವ ಸಾಲದ ಕಂತು ಮರು ಪಾವತಿ ಕಷ್ಟವಾಗಿದೆ.. ಇದರ ಹೊರತಾಗಿಯೂ ಯಾವುದೇ ಸಾಲ ನೀಡಿರುವ ಸಂಸ್ಥೆಗಳು ಸಾರ್ವಜನಿಕರಿಗೆ ಸಾಲ ಮರು ಪಾವತಿಸುವಂತೆ ಒತ್ತಡ ಹೇರಿದ್ದಲ್ಲಿ ಅಂತಹ ಸಂದರ್ಭದಲ್ಲಿ ಆ ಸಂಸ್ಥೆಗಳ ವಿರುದ್ಧ ದೂರು ನೀಡಲು ನೋಡಲ್ ಅಧಿಕಾರಿಗಳನ್ನು ಜಿಲ್ಲಾಧಿಕಾರಿ ನೇಮಿಸಿದ್ದಾರೆ.

ಮೈಕ್ರೋ ಫೈನಾನ್ಸ್ ಗಳು ಹಾಗೂ ಸಹಕಾರಿ ಸಂಸ್ಥೆಗಳು ಸಾಲ ಪಾವತಿಸುವಂತೆ ಒತ್ತಡ ಹೇರಿದ್ದಲ್ಲಿ ದೂರು ನೀಡಲು ಸಹಕಾರಿ ಸಂಘಗಳ ಉಪ ನಿಬಂಧಕರಾದ ಪ್ರವೀಣ್ ನಾಯಕ್ (944863338) ಇವರಿಗೆ ದೂರು ನೀಡುವಂತೆ ತಿಳಿಸಲಾಗಿದೆ. ಇನ್ನುಳಿದಂತೆ ಇತರೆ ಸಂಸ್ಥೆಗಳಿಗೆ ಸಂಬಂಧಿಸಿದ ದೂರುಗಳಾದಲ್ಲಿ, ಲೀಡ್ ಡಿಸ್ಟ್ರಿಕ್ ಮ್ಯಾನೇಜರ್ ಪ್ರವೀಣ್ (9449860916) ಇವರ ಮೂಲಕ ದೂರು ನೀಡಬಹುದಾಗಿದೆ.

ಜಿಲ್ಲಾಧಿಕಾರಿಯವರ ಈ ಆದೇಶ ಜನಸಾಮಾನ್ಯರ ಸಾಲ ಮರುಪಾವತಿ ತಲೆನೋವಿನಿಂದ ಪಾರು ಮಾಡಿದೆ. ಹಾಗೆಯೇ ಈ ನಿರ್ಧಾರಕ್ಕೆ ಸಾರ್ವಜನಿಕ ವಲಯದಿಂದ  ಮೆಚ್ಚುಗೆ ವ್ಯಕ್ತವಾಗಿದೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top