ಕಡಬ ಟೈಮ್ಸ್ , ಪುತ್ತೂರು: ಪುತ್ತೂರಿನ ಕಾಲೇಜೊಂದರ ಕಾನೂನು ಪದವಿ ವಿದ್ಯಾರ್ಥಿ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಜೂ.4ರಂದು ಈ ಘಟನೆ ನಡೆದಿದ್ದು ಸುಳ್ಯ ತಾಲೂಕು ಮರ್ಕಂಜ ಗ್ರಾಮದ ದೇಶಕೋಡಿ ದಿ.ರಘುನಾಥ ಪುರಷರವರ ಪುತ್ರ. ನಿತೇಶ್ ಎಂ.ಆರ್(30.ವ) ಆತ್ಮಹತ್ಯೆ ಮಾಡಿಕೊಂಡವರು.
ಕಾಲೇಜು ದಿನಗಳಲ್ಲಿ ಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದ ಅವರು ಲಾಕ್ ಡೌನ್ ನಿಂದಾಗಿ ಮನೆಯಲ್ಲಿಯೇ ಇದ್ದು ನಿತ್ಯ ಆನ್ ಲೈನ್ ತರಗತಿಯಲ್ಲಿ ಭಾಗಿಯಾಗುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.


