ಸುಳ್ಯದಿಂದ ಆಸ್ಪತ್ರೆಗೆ ಮಗುವೊಂದನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಆಂಬ್ಯುಲೆನ್ಸ್ ಮತ್ತು ಕಂಟೈನರ್ ಮಧ್ಯೆ ಅಪಘಾತ

ಸುಳ್ಯದಿಂದ ಆಸ್ಪತ್ರೆಗೆ ಮಗುವೊಂದನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಆಂಬ್ಯುಲೆನ್ಸ್ ಮತ್ತು ಕಂಟೈನರ್ ಮಧ್ಯೆ ಅಪಘಾತ

Kadaba Times News
0

 ಕಡಬ ಟೈಮ್:  ಆಂಬ್ಯುಲೆನ್ಸ್ ಮತ್ತು ಕಂಟೈನರ್ ಮಧ್ಯೆ ಅಪಘಾತ ಸಂಭವಿಸಿ ಆಂಬ್ಯುಲೆನ್ಸ್‌ನಲ್ಲಿದ್ದ ಐದು ಮಂದಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಬಳಿ ಸೆ.2ರಂದು ಸಂಜೆ ನಡೆದಿದೆ.

ಅಪಘಾತವಾದ ಆಂಬ್ಯುಲೆನ್ಸ್


ಸುಳ್ಯದಿಂದ ಮಂಗಳೂರು ಆಸ್ಪತ್ರೆಗೆ ಮಗುವೊಂದನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತಿದ್ದ ಜಯಪ್ರಕಾಶ್ ಎಂಬವರು ಚಲಾಯಿಸುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.

 

ಘಟನೆಯಿಂದ ಆಂಬ್ಯುಲೆನ್ಸ್ ನಲ್ಲಿದ್ದ ಮಗು ಸಹಿತ ಐದು ಮಂದಿಗೆ ಗಾಯವಾಗಿದ್ದು ಅವರನ್ನು ಇನ್ನೊಂದು ಆಂಬ್ಯುಲೆನ್ಸ್ ಕರೆಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top